ಕೊಲ್ಕತ್ತಾ, 29 ನವೆಂಬರ್ (ಹಿ.ಸ):
ಆ್ಯಂಕರ್ :
ನರೇಂದ್ರ ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಕೋಲ್ಕತ್ತಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ರಾಜ್ಯದಲ್ಲಿ ಒಳನುಸುಳುವಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮತದಾರರು ಮತ್ತು ಆಧಾರ್ ಕಾರ್ಡ್ಗಳನ್ನು ನುಸುಳುಕೋರರಿಗೆ ಬಹಿರಂಗವಾಗಿ ಮತ್ತು ಅಕ್ರಮವಾಗಿ ವಿತರಿಸಲಾಗುತ್ತಿದೆ. “ಇಷ್ಟು ಒಳನುಸುಳುವಿಕೆ ಸಂಭವಿಸುವ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತದೆಯೇ?. ಅದಕ್ಕಾಗಿಯೇ ಮಮತಾ ಬ್ಯಾನರ್ಜಿ ಪೌರತ್ವ ತಿದ್ದುಪಡಿ ಕಾಯ್ದೆ ಅನ್ನು ವಿರೋಧಿಸುತ್ತಿದ್ದಾರೆ. ಆದರೆ ಸಿಎಎ ದೇಶದ ಕಾನೂನು ಎಂದು ನಾನು ಹೇಳುತ್ತೇನೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾವು ಅದನ್ನು ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
