ಬೆಂಗಳೂರು, 6 ಡಿಸೆಂಬರ್(ಹಿ.ಸ):
ಆ್ಯಂಕರ್ :
ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಿದ್ದ ಕಾರಣ ಕರ್ನಾಟಕದಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು ಕೆಲವು ಕಡೆ ಸಾಧಾರಣ ಮಳೆಯಾಗಿತ್ತು. ಇದೀಗ ಚಂಡಮಾರುತದ ಪ್ರಭಾವ ಕಡಿಮೆಯಾದ ಕಾರಣ ಶುಭ್ರ ಆಕಾಶ ನಿರ್ಮಾಣವಾಗುತ್ತಿದ್ದು, ಮೂರ್ನಾಲ್ಕು ದಿನಗಳ ಬಳಿಕ ಸೂರ್ಯ ಇಣುಕಿದ್ದಾನೆ.
ಡಿಸೆಂಬರ್ 10ರಿಂದ 3 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಮುಂದಿನ 24 ಗಂಟೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಇಂದಿನಿಂದ ಡಿಸೆಂಬರ್ 12ರವರೆಗೆ ಆಗಾಗ ಸಾಧಾರಣ ಮಳೆಯಾಗಲಿದೆ.
ಹಿಂದೂಸ್ತಾನ್ ಸಮಾಚಾರ್
