ಬೆಳಗಾವಿ,, 12 ಜನವರಿ(ಹಿ.ಸ):
ಆ್ಯಂಕರ್ :
ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ ಜಾರಿ ವಿಚಾರವಾಗಿ ಬೆಳಗಾವಿಯ ಕೆಎಲ್ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ ಆರೋಗ್ಯ ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ ಡಾ. ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ ಸಮೇತ ಮಾಹಿತಿ ನೀಡಲು ನೋಟಿಸ್ನಲ್ಲಿ ಸೂಚಿಸಲಾಗಿದೆ.
ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.
ಮತ್ತೆ ಮಹಾರಾಷ್ಟ್ರ ಉದ್ಧಟತನ
ಗಡಿ ವಿವಾದ ಇರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಮಂಗೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆರೋಗ್ಯ ಪರಿಹಾರ ನಿಧಿ ಯೋಜನೆ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿಯೂ ನಾವು ಮಾಹಿತಿ ನೀಡಿದ್ದೇವೆ. ಇದು ಗಡಿ ಭಾಗದ ಮರಾಠಿ ಭಾಷಿಕರಿಗಾಗಿ ಅನುಷ್ಠಾನ ಮಾಡ್ತಿದ್ದೇವೆ ಎಂದು ವಿಡಿಯೋ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
