• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶ್ರೀಕೃಷ್ಣದೇವರಾಯರ ಆಡಳಿತ ಮಾದರಿ ಇಂದಿಗೂ ಪ್ರಸ್ತುತ- ಡಾ. ಜಿ. ಪರಮೇಶ್ವರ್
Regional

ಶ್ರೀಕೃಷ್ಣದೇವರಾಯರ ಆಡಳಿತ ಮಾದರಿ ಇಂದಿಗೂ ಪ್ರಸ್ತುತ- ಡಾ. ಜಿ. ಪರಮೇಶ್ವರ್

CliQ INDIA
Last updated: February 4, 2024 12:22 pm
CliQ INDIA
Share
4 Min Read
SHARE

ಹಂಪಿ ಉತ್ಸವ , 3 ಫೆಬ್ರವರಿ :

ಆ್ಯಂಕರ್ : ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಿರುವ ವಿಜಯನಗರ ಸಾಮ್ರಾಜ್ಯದ ಪ್ರಮುಖ ದೊರೆ ಶ್ರೀಕೃಷ್ಣದೇವರಾಯರ ಆಡಳಿತ ಮಾದರಿ ಇಂದಿಗೂ ಪ್ರಸ್ತುತವಾಗಿದ್ದು, ಸರ್ವರನ್ನು ಸಮಾನವಾಗಿ ಕಾಣುವ ಆಡಳಿತ ವ್ಯವಸ್ಥೆಯನ್ನೇ ನಮ್ಮ ಸರ್ಕಾರವೂ ಹೊಂದಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಹಂಪಿಯ ಗಾಯತ್ರಿ ಪೀಠ ಬಳಿ ಅತ್ಯಂತ ಕಲಾತ್ಮಕವಾಗಿ ನಿರ್ಮಿಸಿರುವ ಪ್ರಧಾನ ವೇದಿಕೆಯಲ್ಲಿ ಐತಿಹಾಸಿಕ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಕ್ಕ-ಬುಕ್ಕರು ಪ್ರಾರಂಭಿಸಿದ ವಿಜಯನಗರ ಸಾಮ್ರಾಜ್ಯ 500 ವರ್ಷಗಳ ಹಿಂದಿನ ಭವ್ಯ ಇತಿಹಾಸವಾಗಿದ್ದು, ವಿಜಯನಗರ ಸಾಮ್ರಾಜ್ಯ ಅನೇಕ ಬಾರಿ ಮೊಘಲರನ್ನು ಹಿಮ್ಮೆಟ್ಟಿಸಿ ಆಡಳಿತ ಮಾಡಿದೆ. ಇಡೀ ಜಗತ್ತಿನ ಗಮನ ಸೆಳೆದ ಕೃಷ್ಣದೇವರಾಯರ ಆಡಳಿತ ಇಂದಿಗೂ ಪ್ರಸ್ತುತವಾಗಿದೆ.

ಈ ನಾಡಿನ ಸಂಸ್ಕøತಿ, ಭಾμÉ , ಪರಂಪರೆಯ ರಕ್ಷಣೆ, ಜನಸಾಮಾನ್ಯರನ್ನು ಸಮಾನವಾಗಿ ಕಾಣುವ ಅವರ ಆಡಳಿತವೇ ನಮಗೂ ಮಾದರಿಯಾಗಿದೆ. ಆಗಲೂ ಕೂಡ ಜಾತಿ ವ್ಯವಸ್ಥೆ ಇತ್ತು, ಆದರೂ ಕೃಷ್ಣದೇವರಾಯರು ಎಲ್ಲ ವರ್ಗದವರನ್ನೂ ಸಮಾನತೆಯಲ್ಲಿ ಕಾಣುತ್ತಿದ್ದರು. ನಮ್ಮ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯ ನೀಡುವಂತಹ ಯೋಜನೆಗಳ ಮೂಲಕ ಮಾದರಿಯಾಗಿದೆ.

ಹಂಪಿ ಇಡೀ ವಿಶ್ವದ ಗಮನ ಸೆಳೆಯುವ ಪ್ರವಾಸಿ ತಾಣವಾಗಿದ್ದು, ಇತಿಹಾಸ ಮೆಲಕು ಹಾಕುವ ರೀತಿಯಲ್ಲಿ ಈ ಬಾರಿ ಹಂಪಿ ಉತ್ಸವ ವೈಭವದಿಂದ ಆಚರಿಸಲಾಗುತ್ತಿದೆ. ಉತ್ಸವವು ನಮ್ಮ ಸಂಸ್ಕøತಿ, ಪರಂಪರೆಯನ್ನು ನೆನೆಸಿಕೊಳ್ಳುವಂತಿದೆ ಎಂದರು.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಮಾತನಾಡಿ, ಹಂಪಿ ಉತ್ಸವ ಈ ಭಾಗದ ಜನರಿಗೆ ನಾಡ ಹಬ್ಬ ಇದ್ದಂತೆ, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಯಲ್ಲಿ ಸಂಭ್ರಮ ಮನೆ ಮಾಡಿದೆ. 2013 ರಿಂದ 2018 ಮುಖ್ಯಮಂತ್ರಿ ಸಿದ್ದರಾಯಮ್ಯ 5 ಬಾರಿ ಹಂಪಿ ಉತ್ಸವ ಉದ್ಘಾಟಿಸಿದ್ದರು. ಈ ಬಾರಿಯೂ ಉತ್ಸವ ಉದ್ಘಾಟಿಸಿ ದಾಖಲೆ ಬರೆದಿದ್ದಾರೆ. ಸರ್ಕಾರ 5 ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ 60,000 ಕೋಟಿ ರೂ. ಖರ್ಚು ಮಾಡುತ್ತಿದೆ.

ಇದರ ನಡುವೆ ಮುಖ್ಯಮಂತ್ರಿಗಳು ಬಡವರಿಗಾಗಿ 6 ನೇ ಗ್ಯಾರೆಂಟಿ ಯೋಜನೆ ಮಾದರಿಯಲ್ಲಿ ಸರ್ಕಾರದಿಂದ 2.38 ಲಕ್ಷ ಫಲಾನುಭವಿಗಳು ಮನೆ ಮಂಜೂರು ಮಾಡಲು ಸಮ್ಮತಿಸಿದ್ದಾರೆ. ಈಗಾಗಲೇ ರಾಜ್ಯದ ವಸತಿ ಯೋಜನೆಗಳಿಗೆ ರೂ.8,400 ಕೋಟಿ ಅನುದಾನ ಮಂಜೂರು ಮಾಡಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಈಗಾಗಲೆ ರೂ.500 ಕೋಟಿ ಬಿಡುಗಡೆ ಮಾಡಿದ್ದಾರೆ.

ಕೆಲ ತಿಂಗಳಿನಲ್ಲಿಯೇ 36,000 ಜನರಿಗೆ ಸರ್ಕಾರದಿಂದ ಮನೆ ನೀಡಲಾಗುವುದು. ಮನೆ ನಿರ್ಮಾಣಕ್ಕೆ ರೂ.7.5 ಲಕ್ಷ ಖರ್ಚು ಆಗುತ್ತದೆ. ಬಡವರು ತಮ್ಮ ಪಾಲಿನ ವಂತಿಕೆ ನೀಡಲು ಶಕ್ತರಿಲ್ಲ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಈ ಸರ್ಕಾರದ ಅವಧಿಯಲ್ಲಿ 2.3 ಲಕ್ಷ ಫಲನಾಭವಿಗಳಿಗೆ ಮನೆ ನಿರ್ಮಿಸಿ ಹಸ್ತಾಂತರ ಮಾಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಅವರು ಹೇಳಿದರು.

ವಿಜಯನಗರ ಹೊಸ ಜಿಲ್ಲೆಯಾಗಿದೆ. ಉಸ್ತುವಾರಿ ಸಚಿವನಾದ ಮೇಲೆ ಪ್ರತಿ ತಾಲ್ಲೂಕಿಗೆ ತೆರಳಿ ಹಾಗೂ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಸಿದ್ದೇನೆ. ಜಿಲ್ಲೆಯ ಎಲ್ಲಾ ಸಮಸ್ಯೆಗಳು ಅರಿತು ಸರ್ಕಾರದ ಮಟ್ಟದಲ್ಲಿ ಪರಿಹಾರ ಒದಗಿಸಲು ಸ್ವತಃ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವಂತೆ ಸಚಿವ ಜಮೀರ್ ಅಹ್ಮದ್ ಮುಖ್ಯಮಂತ್ರಿಗಳಿಗೆ ಕೋರಿದರು.

ಯುವ ಜನ ಸೇವಾ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಮಾತನಾಡಿ, ಸಂಸ್ಕøತಿ ಹಾಗೂ ಸಂಪ್ರದಾಯಗಳ ಬಗ್ಗೆ ಜನರಿಗೆ ತಿಳಿಸಲು ಉತ್ಸವಗಳು ಆಯೋಜನೆ ಮುಖ್ಯವಾಗಿದೆ. ವಿಜಯನಗರ ಅರಸ ಕೃಷ್ಣದೇವರಾಯ ಆಡಳಿತವನ್ನು ವಿಶ್ವ ಮಟ್ಟಕ್ಕೆ ಏರಿಸಿದರು. ಅದೇ ರೀತಿ ಮುಖ್ಯಮಂತ್ರಿಗಳು ದೇಶದಲ್ಲೇ ರಾಜ್ಯವನ್ನು ಮುಂಚೂಣಿ ಮುನ್ನಡಿಸುತ್ತಿದ್ದಾರೆ. ಸರ್ವರಿಗೂ ಸಮಬಾಳು ಸಮಪಾಲು ಎಂಬ ತತ್ವದ ಅಡಿ ಜಾರಿತಂದ 5 ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿವೆ. ರಾಮ ರಾಜ್ಯದಂತೆ ಸಿದ್ದರಾಮಯ್ಯನವರ ಆಡಳಿತದಲ್ಲಿ ರಾಜ್ಯವು ಸುಭೀಕ್ಷವಾಗಿದೆ ಎಂದರು.

.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಉತ್ಸವ ಆಯೋಜನೆಯಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಅದಕ್ಕಾಗಿಯೇ ಮೂರು ವೇದಿಕೆಗಳಲ್ಲಿ ನಿರ್ಮಿಸಲಾಗಿದೆ. ಅಚ್ಚುಕಟ್ಟಾಗಿ ಉತ್ಸವ ಆಯೋಜನೆ ಮಾಡಿರುವ ಕುರಿತು ಕಲಾವಿದರು ಮೆಚ್ಚುವೆ ವ್ಯಕ್ತ ಪಡಿಸಿದ್ದಾರೆ ಎಂದರು.

ಉದ್ಘಾಟನೆ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಜಯ್ ಸಿಂಗ್, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಕಂಪ್ಲಿ ಶಾಸಕ ಜಿ.ಎನ್.ಗಣೇಶ್, ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ, ಶಿರುಗುಪ್ಪ ಶಾಸಕ ನಾಗರಾಜ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಜೋಗತಿ ಮಂಜಮ್ಮ, ಹಂಪಿ ಗ್ರಾ.ಪಂ.ಅಧ್ಯಕ್ಷ ರಜನಿ ಷಣ್ಮುಖ, ಮಾಜಿ ಸಂಸದ ಐ.ಜಿ.ಸನದಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬಳ್ಳಾರಿ ವಲಯದ ಐಜಿಪಿ ಲೋಕೇಶ್ಕುಮಾರ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು.ಬಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿಬಾಬು.ಬಿ.ಎಲ್ ಸೇರಿದಂತೆ ಇತರೆ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.

You Might Also Like

ಅಪೂರ್ಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿಯೇ ಪೂರ್ಣಗೊಳಿಸಿ : ಸಚಿವ ಎಚ್. ಕೆ. ಪಾಟೀಲ್
ಮುಖ್ಯಮಂತ್ರಿ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ
ಭಾಗ್ಯನಗರ ಪಪಂ ಅಧ್ಯಕ್ಷ ರಮೇಶ ಹ್ಯಾಟಿ ಪದಗ್ರಹಣ
ಬುಧವಾರದ ಭವಿಷ್ಯ – Hindusthan Samachar Kannada
ವಿವೇಕಾನಂದರ ಚರಿತ್ರೆ ಓದಲು ವಿದ್ಯಾರ್ಥಿಗಳಿಗೆ ಕರೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಹಂಪಿ ಉತ್ಸವ: ನಾಳೆ ಸಾಸುವೆ ಕಾಳು ಗಣಪ ವೇದಿಕೆಯ ಕಾರ್ಯಕ್ರಮಗಳು
Next Article ಬಿಜೆಪಿ ನಾಯಕರು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ-ಡಿ.ಕೆ. ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?