• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮೈಸೂರು ರೇಲ್ವೆ ವಿಭಾಗದ ಘಾಟ್ ವಿಭಾಗ ಸಂಪೂರ್ಣ ವಿದ್ಯುದೀಕರಣ ಪೂರ್ಣ
Regional

ಮೈಸೂರು ರೇಲ್ವೆ ವಿಭಾಗದ ಘಾಟ್ ವಿಭಾಗ ಸಂಪೂರ್ಣ ವಿದ್ಯುದೀಕರಣ ಪೂರ್ಣ

CliQ INDIA
Last updated: December 29, 2025 10:40 am
CliQ INDIA
Share
2 Min Read
SHARE

ಮೈಸೂರು, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಭಾರತೀಯ ರೈಲ್ವೆಯ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ಒಂದಾದ ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದ ಸಂಪೂರ್ಣ ವಿದ್ಯುದೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 28.12.2025 ರಂದು ವಿದ್ಯುತ್ ಲೋಕೊಮೋಟಿವ್‌ನ ಪ್ರಯೋಗಾತ್ಮಕ ಚಾಲನೆ ಯಶಸ್ವಿಯಾಗಿ ನೆರವೇರಿದ್ದು, ಇದು ಪ್ರದೇಶದ ರೈಲು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

55 ಕಿಲೋಮೀಟರ್ ಉದ್ದದ ಈ ಘಾಟ್ ಮಾರ್ಗವು 1ಕ್ಕೆ 50ರಷ್ಟು ತೀವ್ರ ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು ಹಾಗೂ 108 ತೀಕ್ಷ್ಣ ವಕ್ರಗಳನ್ನು ಹೊಂದಿದ್ದು, ಭೂಕುಸಿತಗಳಿಗೆ ಅತಿಯಾಗಿ ಒಳಪಡುವ ಪ್ರದೇಶವಾಗಿದೆ. ಇಂತಹ ಕಠಿಣ ಭೌಗೋಳಿಕ ಪರಿಸ್ಥಿತಿಗಳ ನಡುವೆ ವಿದ್ಯುದೀಕರಣ ಕಾರ್ಯ ಕೈಗೊಳ್ಳುವುದು ದೊಡ್ಡ ತಾಂತ್ರಿಕ ಸವಾಲಾಗಿತ್ತು.

ಈ ಮಹತ್ವದ ಯೋಜನೆಯು 01 ಡಿಸೆಂಬರ್ 2023ರಂದು ಆರಂಭಗೊಂಡು ₹93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಯೋಜನೆಯಡಿ ಐದು ಸ್ವಿಚಿಂಗ್ ಸ್ಟೇಷನ್‌ಗಳನ್ನು ನಿರ್ಮಿಸಲಾಗಿದ್ದು, ಸಂಪೂರ್ಣ ಮಾರ್ಗದಲ್ಲಿ ಮೇಲ್ಮೈ ವಿದ್ಯುದೀಕರಣ ವ್ಯವಸ್ಥೆ ಅಳವಡಿಸಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿಮೀ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ.

ಘಾಟ್ ವಿಭಾಗದಲ್ಲಿರುವ 57 ಸುರಂಗಗಳಲ್ಲಿ ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್‌ಗಳು ಹಾಗೂ 419 ಹೆಚ್ಚುವರಿ (ಸ್ಪೇರ್) ಬ್ರಾಕೆಟ್‌ಗಳನ್ನು ಒದಗಿಸಲಾಗಿದೆ. ಸುರಂಗಗಳ ಲೈನ್ಡ್ ಹಾಗೂ ಅನ್ಲೈನ್ಡ್ ಭಾಗಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಸವಿಸ್ತಾರ ಭೌಗೋಳಿಕ ಅಧ್ಯಯನ ನಡೆಸಲಾಗಿದೆ. ಪ್ರತಿಯೊಂದು ಬ್ರಾಕೆಟ್ ಸ್ಥಳದಲ್ಲಿಯೂ ಬೋಲ್ಟ್‌ಗಳ ಸ್ಥಿರತೆ ಖಚಿತಪಡಿಸಲು ಪುಲ್-ಔಟ್ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ.

830 ಮೀಟರ್‌ವರೆಗೆ ವಿಸ್ತರಿಸಿರುವ ತೀವ್ರ ಏರುಗುಡ್ಡ ಪ್ರದೇಶಗಳಲ್ಲಿ ಮೇಲ್ಮೈ ವಿದ್ಯುತ್ ವ್ಯವಸ್ಥೆಯ ಒತ್ತಡ ಮತ್ತು ಸ್ಥಿರತೆಯನ್ನು ಕಾಪಾಡಲು ವಿಶೇಷ ತಾಂತ್ರಿಕ ಉಪಕರಣಗಳು ಹಾಗೂ ಬಲಿಷ್ಠ ಎಂಜಿನಿಯರಿಂಗ್ ವಿನ್ಯಾಸಗಳನ್ನು ಅಳವಡಿಸಲಾಗಿದೆ. ಭಾರಿ ಮಳೆ, ನಿರಂತರ ಭೂಕುಸಿತಗಳು, ಮಣ್ಣಿನ ಕೊಚ್ಚಿಹೋಗುವಿಕೆ ಮತ್ತು ಶಿಲಾಪಾತಗಳು ಕಾರ್ಯಾಚರಣೆಗೆ ಗಂಭೀರ ಅಡಚಣೆ ಉಂಟುಮಾಡಿದ್ದವು. ಅಲ್ಲದೆ, ದೂರದ ಹಾಗೂ ಅಪ್ರಾಪ್ಯ ಪ್ರದೇಶಗಳಿಗೆ ರೈಲು ಮಾರ್ಗದ ಮೂಲಕವೇ ಸಾಮಗ್ರಿಗಳನ್ನು ಸಾಗಿಸುವ ಅನಿವಾರ್ಯತೆಯೂ ಎದುರಾಯಿತು.

ಸೀಮಿತ ಸ್ಥಳಾವಕಾಶ ಮತ್ತು ತೀವ್ರ ಏರುಗುಡ್ಡಗಳ ಹಿನ್ನೆಲೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ವಿಧಿಸಿದ್ದ ಕಠಿಣ ಸುರಕ್ಷತಾ ಹಾಗೂ ಕಾರ್ಯಾಚರಣಾ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ನಿರಂತರ ಮತ್ತು ಸುರಕ್ಷಿತ ರೈಲು ಸಂಚಾರವನ್ನು ಕಾಪಾಡುತ್ತಲೇ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ.

ವಿದ್ಯುದೀಕರಣ ಕಾರ್ಯ ಹಾಗೂ ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆ ಯಶಸ್ವಿಯಾಗಿರುವುದರಿಂದ, ಸಂಪೂರ್ಣ ಘಾಟ್ ವಿಭಾಗವು ಈಗ ವಿದ್ಯುತ್ ಚಾಲನೆಗೆ ಸಂಪೂರ್ಣ ಸಿದ್ಧವಾಗಿದೆ. ಇದರಿಂದ ಸ್ವಚ್ಛ, ಶಕ್ತಿಸಮರ್ಥ ಮತ್ತು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ ರೈಲು ಸಂಚಾರಕ್ಕೆ ಹೊಸ ಅವಕಾಶಗಳು ತೆರೆಯಲಿವೆ. ಈ ಸಾಧನೆ ಭಾರತೀಯ ರೈಲ್ವೆಯ ಶೇಕಡಾ 100 ವಿದ್ಯುದೀಕರಣ ಗುರಿಯತ್ತದ ಮಹತ್ವದ ಹೆಜ್ಜೆಯಾಗಿದ್ದು, ಕಠಿಣ ಭೌಗೋಳಿಕ ಪರಿಸ್ಥಿತಿಗಳಲ್ಲಿಯೂ ಪರಿಸರ ಸ್ನೇಹಿ ಮತ್ತು ಸ್ಥಿರ ರೈಲು ಮೂಲಸೌಕರ್ಯ ನಿರ್ಮಾಣದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಮೈಸೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಶ್ರೀಲಂಕಾಗೆ ಹೊರಟಿದ್ದ ಸರಕು ಹಡಗಿನಲ್ಲಿ ಭಾರಿ ಬೆಂಕಿ | BulletsIn
ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಾದ್ಯಂತ ಜಾಗೃತಿ ರ್ಯಾಲಿ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಉಪಹಾರ ಕೂಟ
ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಗಳಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರ ನಿರ್ಧಾರ
ಮದ್ಯ ಮಾರಾಟ ನಿಷೇಧ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಡಿ. 29–30ರಂದು ಪುದುಚೇರಿ, ಕೇರಳ ಹಾಗೂ ತಮಿಳುನಾಡುಗಳಿಗೆ ಉಪರಾಷ್ಟ್ರಪತಿ ಭೇಟಿ
Next Article ಸಿಡ್ನಿ ಟೆಸ್ಟ್‌ಗೆ ಮುನ್ನ ಇಂಗ್ಲೆಂಡ್‌ಗೆ ಆಘಾತ ; ಗಾಯದ ಕಾರಣ ಗಸ್ ಅಟ್ಕಿನ್ಸನ್ ಹೊರಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?