ಮೈಸೂರು,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ಆಗಮಿಸಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಎಸಿಪಿ ಗಜೇಂದ್ರ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಭದ್ರತೆ ನೀಡಲಾಗಿದ್ದು 1 ಸಿಎಆರ್, 1 ಕೆಎಸ್ಆರ್ಪಿ ತುಕಡಿ, ಸಬ್ ಇನ್ಸ್ಪೆಕ್ಟರ್ ಹಾಗೂ ಎಎಸ್ಐ ಸೇರಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
