ಬೆಂಗಳೂರು,17 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಭಾರತ ಸರ್ಕಾರ ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಿದ ಭಾರತೀಯ ನ್ಯಾಯ ಸಂಹಿತ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಹಾಗೂ ಭಾರತೀಯ ಸಾಕ್ಷ್ಯ ಮಸೂದೆ 2023 ಮಸೂದೆಗಳ ಕುರಿತು ಅಧ್ಯಯನ ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅಧ್ಯಕ್ಷತೆಯ ಸಮಿತಿಯು ತನ್ನ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ನಿವೃತ್ತ ಐಪಿಎಸ್ ಅಧಿಕಾರಿ ಎನ್. ಎಸ್. ಮೇಘರಿಕ್ ಸೇರಿದಂತೆ ಸಮಿತಿಯ ಸದಸ್ಯರು ಹಾಜರಿದ್ದು ವರದಿಯ ಮುಖ್ಯಾಂಶಗಳನ್ನು ವಿವರಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
