ಬೆಳಗಾವಿ, 15 ಫೆಬ್ರವರಿ :
ಆ್ಯಂಕರ್ : ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ
