ಬೆಂಗಳೂರು, 1 ಜನವರಿ(ಹಿ.ಸ):
ಆ್ಯಂಕರ್ :‘ಕಾಟೇರ’ ಚಿತ್ರದ ಅಭೂತಪೂರ್ವ ಗೆಲುವಿಗೆ ‘ಕಾಟೇರ’ಖುಷಿಯಾಗಿದೆ ಈ ಹಿನ್ನೆಲೆಯಲ್ಲಿ ಚಿತ್ರದ ನಾಯಕ ದರ್ಶನ್ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಅಭಿಮಾನಿಗಳ ಜೊತೆಗೆ ಸಂಭ್ರಮಾಚರಣೆ ಮಾಡಲಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ, ರಾಕ್ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಚಿತ್ರಕ್ಕೆ ರಾಜ್ಯಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಗೆಲುವಿನ ಕುರಿತು ದರ್ಶನ್, ‘ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಚಿತ್ರತಂಡದ ಮನತುಂಬಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
