
ನವದೆಹಲಿ,12ನವೆಂಬರ್ (ಹಿ.ಸ):
ಆ್ಯಂಕರ್ :
ಬೆಳಕಿನ ಹಬ್ಬ ದೀಪಾವಳಿಯನ್ನು ಇಂದು ಭಾರತ ಮತ್ತು ವಿದೇಶಗಳಲ್ಲಿ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ನಾಗರಿಕರಿಗೆ ದೀಪಾವಳಿಯ ಮುನ್ನಾದಿನದಂದು ಶುಭಾಶಯ ಕೋರಿದ್ದಾರೆ. ದೀಪಾವಳಿಯು ಆನಂದ ಮತ್ತು ಸಂತಸದ ಹಬ್ಬವಾಗಿದೆ ಹಾಗೂ ಇದನ್ನು ಕತ್ತಲೆಯಿಂದ ಬೆಳಕಿನಡೆಗೆ, ಕೆಟ್ಟದ್ದರ ಮೇಲೆ ಒಳ್ಳೆಯದು ಮತ್ತು ಅನ್ಯಾಯದ ಮೇಲೆ ನ್ಯಾಯದ ವಿಜಯವನ್ನು ಗುರುತಿಸಲು ಆಚರಿಸಲಾಗುತ್ತದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ದೀಪಾವಳಿ ಹಬ್ಬವು ಆತ್ಮಸಾಕ್ಷಿಯನ್ನು ಬೆಳಗಿಸುತ್ತದೆ ಮತ್ತು ಮಾನವೀಯತೆಯ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರತಿಯೊಬ್ಬರನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದ್ದಾರೆ. ದೀಪಗಳ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ಮತ್ತು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ರಾಷ್ಟ್ರಪತಿ ಕರೆ ನೀಡಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಸಹ ದೀಪಾವಳಿಯ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಆಳವಾದ ಪೂಜ್ಯಭಾವ ಮತ್ತು ಮಿತಿಯಿಲ್ಲದ ಸಂತೋಷದಿಂದ ಆಚರಿಸಲಾಗುವ ದೀಪಾವಳಿ ಹಬ್ಬವು ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಪ್ರತಿನಿಧಿಸುತ್ತದೆ, ಭರವಸೆ ಮತ್ತು ಸದ್ಗುಣದ ಶಾಶ್ವತ ಮನೋಭಾವವನ್ನು ಸಾಕಾರಗೊಳಿಸುತ್ತದೆ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ೧೪೦ ಕೋಟಿ ಭಾರತೀಯರ ಕಠಿಣ ಪರಿಶ್ರಮದ ಪ್ರತೀಕವಾಗಿ ಈ ದೀಪಾವಳಿಯನ್ನು ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಕರೆ ನೀಡಿದ್ದಾರೆ. ಉದ್ಯಮಿಗಳ ಸೃಜನಶೀಲತೆ ಮತ್ತು ಅವಿರತ ಮನೋಭಾವದಿಂದಾಗಿ ಜನರು ಸ್ಥಳೀಯ ಮತ್ತು ಭಾರತದ ಪ್ರಗತಿಗಾಗಿ ಧ್ವನಿ ಎತ್ತಬಹುದು ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮ ಹಂಚಿಕೊಂಡಿದ್ದಾರೆ. ಜತೆಗೆ ಈ ಉತ್ಸವವು ಆತ್ಮನಿರ್ಭರ ಭಾರತಕ್ಕೆ ನಾಂದಿ ಹಾಡುತ್ತದೆ ಎಂದು ಅವರು ಆಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
