
ದೆಹಲಿ, 23 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ರ್ಪಧಿಸುವಂತೆ ಬಿಜೆಪಿ ಮುಖಂಡ ಅಗ್ನಿಮಿತ್ರ ಪೌಲ್ ಸವಾಲು ಹಾಕಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ನಿಲ್ಲುವಂತೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಬ್ಯಾನರ್ಜಿ ಅವರನ್ನು ಒತ್ತಾಯಿಸಿದರು.
ಮಮತಾ ಬ್ಯಾನರ್ಜಿ ವಾರಣಾಸಿಯಿಂದ ಏಕೆ ಸ್ರ್ಪಧಿಸುವುದಿಲ್ಲ? ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಸ್ಥಾನದಲ್ಲಿ ಮಮತಾ ಬ್ಯಾನರ್ಜಿ ಸ್ರ್ಪಧಿಸುವ ಧೈರ್ಯವಿದ್ದರೆ, ಅವರು ಹಾಗೆ ಮಾಡಬೇಕು. ನೀವು ಪ್ರಧಾನಿಯಾಗಲು ಬಯಸುತ್ತೀರಿ, ಸರಿ? ನಂತರ ಅವರು ನಮ್ಮ ಪ್ರಧಾನಿ ವಿರುದ್ಧ ಸ್ರ್ಪಧಿಸಬೇಕು ಅಲ್ಲವೇ ಎಂದು ಅಗ್ನಿಮಿತ್ರ ತಿಳಿಸಿದ್ದಾರೆ.
2024 ರ ಚುನಾವಣೆಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವಂತೆ ಬಂಗಾಳದ ಮುಖ್ಯಮಂತ್ರಿ ಇಂಡಿಯಾ ಒಕ್ಕೂಟವನ್ನು ಒತ್ತಾಯಿಸಿದ ದಿನಗಳ ನಂತರ ಪಾಲ್ ಅವರ ಈ ಪ್ರತಿಕ್ರಿಯೆಯು ಬಂದಿತು. ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ಮುಖವಾಗಬೇಕು ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್
