• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೊಪ್ಪಳ : ಉಪ ಲೋಕಾಯುಕ್ತರಿಂದ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ
Regional

ಕೊಪ್ಪಳ : ಉಪ ಲೋಕಾಯುಕ್ತರಿಂದ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ

CliQ INDIA
Last updated: November 1, 2025 6:35 am
CliQ INDIA
Share
2 Min Read
SHARE
ಕೊಪ್ಪಳ-ಉಪ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ
ಕೊಪ್ಪಳ-ಉಪ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ
ಕೊಪ್ಪಳ-ಉಪ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು, ಕುಂದುಕೊರತೆ ಹಾಗೂ ದೂರುಗಳ ವಿಚಾರಣೆ

ಕೊಪ್ಪಳ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಅಹವಾಲು, ಕುಂದುಕೊರತೆ ದೂರು ವಿಚಾರಣೆ ನಡೆಸಿದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಗುರುವಾರ ಜಿಲ್ಲಾಡಳಿತ ಭವನದಲ್ಲಿ ಪ್ರಕರಣಗಳ ವಿಚಾರಣೆ ನಡೆಸಿದರು.

ಒಟ್ಟು 388 ಕ್ಕೂ ಅಧಿಕ ಅರ್ಜಿಗಳು ಸ್ವೀಕಾರ: ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 388 ಕ್ಕೂ ಅಧಿಕ ಅರ್ಜಿಗಳು ಸ್ವೀಕೃತಗೊಂಡವು. ಸಾರ್ವಜನಿಕ ಅಹವಾಲು ಹಾಗೂ ಕುಂದುಕೊರತೆ ದೂರು ಅರ್ಜಿ ಸಲ್ಲಿಸಲು ಜನರಿಗಾಗಿ ಪ್ರತ್ಯೇಕ ಕೌಂಟರಗಳನ್ನು ಸ್ಥಾಪಿಸಲಾಗಿತ್ತು. ಅರ್ಜಿಸಲ್ಲಿಸಲು ಬಂದ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಸಾರ್ವಜನಿಕರ ಅಹವಾಲು, ಕುಂದುಕೊರತೆ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತರು ಕಾನೂನು ರಿತ್ಯ ವಿಚಾರಣೆ ನಡೆಸಿದರು. ಬೆಳಗ್ಗೆಯಿಂದ ರಾತ್ರಿವರೆಗೆ ನಡೆದ ಈ ಸುಧೀರ್ಘ ಅವಧಿಯ ವಿಚಾರಣೆಯಲ್ಲಿ ಕೆಲವು ಪ್ರಕರಣಗಳು ಸ್ಥಳದಲ್ಲಿಯೇ ಇತ್ಯರ್ಥಗೊಂಡವು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕರಾದ ಡಾ. ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಾಗುಬ್ಬಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತಕುಮಾರ್, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ ಇ.ಟಿ. ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಹಲವಾರು ಸ್ಥಳಗಳಿಗೆ ಭೇಟಿ : ಕಾರ್ಯಕ್ರಮಕ್ಕೂ ಮುಂಚೆ ಗುರುವಾರ ಬೆಳಿಗ್ಗೆ ಚಿಕ್ಕಸಿಂಧೋಗಿ ಹತ್ತಿರದಲ್ಲಿ ಕೊಪ್ಪಳ ನಗರಸಭೆ ವತಿಯಿಂದ ನಿರ್ಮಿಸಿರುವ ಎರಡು ಸಾವಿರ ಗುಂಪು ಮನೆಗಳಿಗೆ ಉಪಲೋಕಾಯುಕ್ತರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ನಗರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು.

ನಂತರ ಕೊಪ್ಪಳದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಎಪಿಎಂಸಿ ಗೆ ಬರುವ ತೆರಿಗೆ ಹಣದಲ್ಲಿ ರೈತ ಭವನ ನಿರ್ಮಿಸಬೇಕು. ಇದರಿಂದ ಬೆಳೆಗಳ ಮಾರಾಟಕ್ಕೆ ಹಳ್ಳಿಗಳಿಂದ ಬರುವ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಇದರ ಜೊತೆಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮತ್ತು ಶೌಚಾಲಯದ ವ್ಯವಸ್ಥೆಯನ್ನು ಸಹ ಮಾಡಿಕೊಡಬೇಕು. ಎಪಿಎಂಸಿ ಯಲ್ಲಿ ಕೆಲಸ ಮಾಡುವ ಎಲ್ಲಾ ಹಮಾಲರಿಗೆ ಕಡ್ಡಾಯವಾಗಿ ಇನ್ಸೂರೆನ್ಸ್ ಮಾಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ -ಬಸವರಾಜ ಬೊಮ್ಮಾಯಿ
ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ | BulletsIn
ಕಬಿನಿ‌ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ
ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ನವೀಕರಣ
ಮುಖ್ಯಮಂತ್ರಿ ಸಿದ್ಧರಾಮಯ್ಯ ನವದೆಹಲಿ ಪ್ರವಾಸ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಚೀನಾ ಗಡಿಯಲ್ಲಿ ಭಾರತದ ವಿಶ್ವದ ಅತಿ ಎತ್ತರದ ವಾಯುನೆಲೆ ಕಾರ್ಯಾರಂಭ
Next Article ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ. ರಾಮದರ್ಶ ಮಿಶ್ರಾ ಅಂತ್ಯಕ್ರಿಯೆ ಇಂದು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?