• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅಧಿಕೃತ ಭೇಟಿ – ಸ್ಪಷ್ಟನೆ
Regional

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅಧಿಕೃತ ಭೇಟಿ – ಸ್ಪಷ್ಟನೆ

CliQ INDIA
Last updated: January 2, 2026 12:55 am
CliQ INDIA
Share
5 Min Read
SHARE

ಬಳ್ಳಾರಿ, 01 ಜನವರಿ (ಹಿ.ಸ.) :

ಆ್ಯಂಕರ್ : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಬಳ್ಳಾರಿ ಜಿಲ್ಲೆಗೆ (ಡಿ.25 ರಿಂದ 28 ರ ವರೆಗೆ) ಅಧಿಕೃತವಾಗಿ ಭೇಟಿ ನೀಡಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಇತರೆ ಅಧಿಕಾರಿಗಳೊಂದಿಗೆ ಜಿಲ್ಲೆಗೆ ಸಂಬ0ಧಿಸಿದ0ತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದು, ಕಾರ್ಯದರ್ಶಿಯವರ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿರುವುದಿಲ್ಲ ಎಂಬುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ.

ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಆಗಮಿಸುವ ಪೂರ್ವ ನಿಗಧಿತ ಯೋಜನೆಗಳಿದ್ದಲ್ಲಿ ಈ ಕುರಿತು ಪೂರ್ವಭಾವಿಯಾಗಿಯೇ ಪತ್ರಿಕಾ ಪ್ರಕಟಣೆ ಮೂಲಕ ಪ್ರಚಾರ ನೀಡಿ ಮಾಹಿತಿ ನೀಡಲಾಗುತ್ತದೆ ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನಿ ಇಲಾಖೆಯ ಉಪನಿರ್ದೇಶಕರಾದ ದ್ವಿತೀಯ ಈ.ಸಿ ಅವರು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ, ಸಂಘ ಅಥವಾ ಸಂಘಟನೆಗಳು ಯಾವುದೇ ಸಂದರ್ಭಗಳಲ್ಲಿಯೂ ತಮ್ಮ ಅಹವಾಲು, ಮನವಿ ಅಥವಾ ದೂರುಗಳನ್ನು ಸಲ್ಲಿಸಲು ಮುಕ್ತ ಅವಕಾಶಗಳಿವೆ. ಇದಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ, ಇಲಾಖಾ ಕಾರ್ಯದರ್ಶಿಗಳ ಈ ಭೇಟಿಯ ಸಂದರ್ಭದಲ್ಲಿ ಅಹವಾಲುಗಳನ್ನು ಸ್ವೀಕರಿಸುವ ಯಾವುದೇ ಪೂರ್ವನಿಯೋಜಿತ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಲಾಖಾ ಕಾರ್ಯದರ್ಶಿಗಳು ಅಹವಾಲುಗಳನ್ನು ಸ್ವೀಕರಿಸಿರುವುದಿಲ್ಲ ಮತ್ತು ಖಾಸಗಿ ಓಡಾಟಕ್ಕೆ ಸರ್ಕಾರಿ ವಾಹನ ಬಳಕೆ ಎಂಬುದಾಗಿ ಪ್ರಕಟವಾಗಿರುವ ಸುದ್ದಿಯು ತಪ್ಪು ಮಾಹಿತಿಯನ್ನು ಒಳಗೊಂಡಿದೆ ಎಂದು ಉಪನಿರ್ದೇಶಕರು ಹೇಳಿದ್ದಾರೆ.

ಇಲಾಖಾ ಕಾರ್ಯದರ್ಶಿಗಳ ಈ ಪ್ರವಾಸವು ಪೂರ್ವ ನಿಗಧಿತ ಅಧಿಕೃತ ಪ್ರವಾಸವಾಗಿದ್ದು, ಈ ಪ್ರವಾಸ ಕಾರ್ಯಕ್ಕೆ ಇಲಾಖಾ ಕಾರ್ಯದರ್ಶಿಗಳಿಗೆ ಮಂಜೂರಾಗಿರುವ ಅಧಿಕೃತ ವಾಹನವನ್ನೇ ಬಳಸಲಾಗಿದೆ. ಈ ರೀತಿಯ ತಪ್ಪು ಮಾಹಿತಿಯನ್ನು ನೀಡಿರುವಂತಹ ಸಂಘಟನೆಯವರು, ಮಾರ್ಗ ಮಧ್ಯೆ ಇಲಾಖಾ ಕಾರ್ಯದರ್ಶಿಗಳನ್ನು ಭೇಟಿಯಾದ ಸಂದರ್ಭದಲ್ಲಿಯೂ ಯಾವುದೇ ಅಹವಾಲು ಅಥವಾ ಮನವಿಯನ್ನು ಸಲ್ಲಿಸಿರುವುದಿಲ್ಲ.

ಯಾವುದೇ ವ್ಯಕ್ತಿ, ಸಂಘ ಅಥವಾ ಸಂಘಟನೆಗಳು ಯಾವುದೇ ಸಂದರ್ಭಗಳಲ್ಲಿಯೂ ತಮ್ಮ ಅಹವಾಲು, ಮನವಿ ಅಥವಾ ದೂರುಗಳನ್ನು ಸಲ್ಲಿಸಲು ಮುಕ್ತ ಅವಕಾಶವಿದೆ. ಇಲಾಖಾ ಕಾರ್ಯದರ್ಶಿಗಳ ಭೇಟಿಗೆ ಸಮಯ ಕೋರಿದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಭಾನುವಾರ ಮೆ.ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ:2396 ಸಂಬ0ಧಿಸಿದ0ತೆ ವಿವಿಧ ವಿಷಯಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಸೋಮವಾರದಂದು ತೋರಣಗಲ್ಲಿನ ಮೆ.ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಡೌನ್‌ಹಿಲ್ ಪೈಪ್ಸ್ ಕನ್ವೇಯರ್ ವ್ಯವಸ್ಥೆ ಚಾಲ್ತಿಯಲ್ಲಿರುವ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 0006 (ದೇವದಾರಿ) ಗೆ ಭೇಟಿ ನೀಡಿ ಕಬ್ಬಿಣದ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ಡೌನ್‌ಹಿಲ್ ಪೈಪ್ಸ್ ಕನ್ವೇಯರ್ ಮೂಲಕ ಸಾಗಾಣಿಕೆಯ ವಿಧಾನಗಳ ಕುರಿತು ಪರಿಶೀಲಿಸಿದ್ದಾರೆ.

ಮೆ.ಕೆಎಸ್‌ಎಂಸಿಎಲ್ (ಎಂಎ0ಎಲ್) ಕಚೇರಿಗೆ ಭೇಟಿ ನೀಡಿ ಕಚೇರಿಗೆ ಸಂಬ0ಧಿತ ವಿಷಯಗಳ ಕುರಿತು ಚರ್ಚಿಸಿದ ಅವರು, ಗಣಿಗಾರಿಕೆ, ಮಾದರಿಗಳ ಸಂಗ್ರಹಣೆ ಮತ್ತು ಮಾದರಿಗಳ ವಿಶ್ಲೇಷಣೆಗಾಗಿ ಪ್ರಯೋಗಾಲಯದ ವ್ಯವಸ್ಥೆ ಮತ್ತು ಇತರೆ ಸಂಬAಧಿತ ವಿಷಯಗಳ ಕುರಿತಂತೆ ಮೆ.ಕೆಎಸ್‌ಎಂಸಿಎಲ್ ಸಂಸ್ಥೆಯ ಅಧಿಕಾರಿಗಳೊಂದಿಗೆ ರೋಹಿಣಿ ಸಿಂಧೂರಿ ಅವರು ಚರ್ಚಿಸಿದ್ದಾರೆ.

ಮಂಗಳವಾರ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಂಡೂರು ತಾಲ್ಲೂಕಿನ ಸುಬ್ಬರಾಯನಹಳ್ಳಿ ವ್ಯಾಪ್ತಿಯಲ್ಲಿರುವ ಮೆ.ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (ಕೆಎಸ್‌ಎಂಸಿಎಲ್/ ಎಂಎAಎಲ್) ದ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2629 ರ ಪ್ರದೇಶಕ್ಕೆ ಭೇಟಿ ನೀಡಿ, ಕಬ್ಬಿಣದ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ಸಾಗಾಣಿಕೆಯ ವಿಧಾನಗಳನ್ನು ಮತ್ತು ಇತರೆ ಸಂಬ0ಧಿತ ವಿಷಯಗಳ ಕುರಿತು ಪರಿಶೀಲನೆಯನ್ನು ನಡೆಸಿದ್ದಾರೆ.

ಬಳಿಕ ಕಾರ್ಯದರ್ಶಿಗಳು ಮೆ.ಸಂಡೂರು ಮ್ಯಾಂಗ್‌ನೀಸ್ ಮತ್ತು ಐರನ್ ಓರ್ಸ್ ಲಿ., (ಸ್ಮಯೋರ್) ನ ಕಬ್ಬಿಣ ಮತ್ತು ಮ್ಯಾಂಗನೀಸ್ ಗಣಿ ಗುತ್ತಿಗೆ ಸಂಖ್ಯೆ: 2678/2580 ರ ಕಾಣಿಗೆ ಮರದ ಕೊಳ್ಳ (ಕೆಎಂಕೆ) ಬ್ಲಾಕ್ ಗೆ ಭೇಟಿ ನೀಡಿ ಮ್ಯಾಂಗನೀಸ್ ಅದಿರು ಉತ್ಪಾದನೆ, ಸಂಸ್ಕರಣೆ ಮತ್ತು ದಾಸ್ತಾನುಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ.

ಮೆ.ಎನ್‌ಎಂಡಿಸಿ ಲಿ.ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 1111 (ಕುಮಾರಸ್ವಾಮಿ) ಗಣಿ ಗುತ್ತಿಗೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಸೂಚನೆ ನೀಡಿದ್ದಾರೆ. ಎನ್‌ಎಂಡಿಸಿ ಸಂಸ್ಥೆಯ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 1111 ರಿಂದ ಈ ಸಂಸ್ಥೆಯವರು ಅರಣ್ಯ ವಿಮೋಚನೆ ಪಡೆದಿರುವ ರಸ್ತೆ ಮೂಲಕ ಮೆ.ಎನ್‌ಎಂಡಿಸಿ ಲಿ., ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2396 ಗೆ ತೆರಳುವ ಮಾರ್ಗ ಮಧ್ಯೆ ರೈತ ಸಂಘದವರು ಮೆ.ಎನ್‌ಎಂಡಿಸಿ ಲಿ., ನ0 ಸೆಕ್ಯೂರಿಟಿ ಗೇಟ್ ಬಳಿಯಲ್ಲಿ ಇಲಾಖಾ ಕಾರ್ಯದರ್ಶಿಗಳ ವಾಹನ ತಡೆದು, ಸಂಘಟನೆಯ ಸದಸ್ಯ ಶ್ರೀಶೈಲ ಆಲದಹಳ್ಳಿ ಎಂಬುವವರು ಮೆ.ಕೆಐಓಸಿಎಲ್ ಲಿ., ನ ಗಣಿ ಗುತ್ತಿಗೆ ಸಂಖ್ಯೆ: 20 ರ ಅವಧಿ ವಿಸ್ತರಣೆಯನ್ನು ಮಾಡದಂತೆ ಅಹವಾಲನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಕಚೇರಿಗೆ ರವಾನಿಸಲಾಗಿದೆ ಎಂದು ಕಾರ್ಯದರ್ಶಿಯವರಿಗೆ ತಿಳಿಸಿದರು.

ಎಫ್‌ಸಿ ಪಡೆದ ರಸ್ತೆಯಲ್ಲಿ ಎನ್‌ಎಂಡಿಸಿ ಲಿ., ಸಂಸ್ಥೆ ಸಾರ್ವಜನಿಕರಿಗೆ ಓಡಾಡಲು ಅವಕಾಶ ನೀಡದೇ ಇರುವುದರಿಂದ ಈ ಯಾರನ್ನೂ ರಸ್ತೆಯಲ್ಲಿ ತೆರಳಲು ಬಿಡುವುದಿಲ್ಲವೆಂದು ಕಾರ್ಯದರ್ಶಿಗಳ ಮುಂದಿನ ಪ್ರಯಾಣಕ್ಕೆ ತಡೆ ಒಡ್ಡಿದ್ದರು. ಕೇಂದ್ರೀಯ ಕೈಗಾರಿಕಾ ಸುರಕ್ಷತಾ ಪಡೆಯ ಸಿಬ್ಬಂದಿ, ಎನ್‌ಎಂಡಿಸಿ ಲಿ., ನ ಪ್ರತಿನಿಧಿಗಳು ಮತ್ತು ಇಲಾಖಾ ಅಧಿಕಾರಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳ ಮನವಿಗಳ ಹೊರತಾಗಿಯೂ ತೆರಳಲು ಅವಕಾಶ ಮಾಡಿಕೊಡಲು ಸಹಮತಿಸಿರುವುದಿಲ್ಲ.

ಇಲಾಖೆಗೆ ಯಾವುದೇ ಸಂಘಟನೆಯವರು ಯಾವುದೇ ಸಂದರ್ಭದಲ್ಲಿಯೂ ಸರ್ಕಾರಕ್ಕೆ ಮತ್ತು ಕಚೇರಿಗೆ ಮನವಿ ಸಲ್ಲಿಸಬಹುದಾಗಿದೆ. ಆದರೆ ಇಲಾಖಾ ಕಾರ್ಯದರ್ಶಿಗಳ ಅಧಿಕೃತ ಭೇಟಿಯ ಸಂದರ್ಭದಲ್ಲಿ, ತಾವು ಯಾವುದೇ ಮನವಿ/ಅಹವಾಲನ್ನು ಸಲ್ಲಿಸಲು ಕಾಲಾವಕಾಶ ನೀಡುವಂತೆ ಇಲಾಖೆಯ ಯಾವುದೇ ಅಧಿಕಾರಿಯವರಿಗಾಗಲೀ ಅಥವಾ ಕಾರ್ಯದರ್ಶಿಗಳಿಗಾಗಲೀ ದೂರವಾಣಿ, ಮಿಂಚ0ಚೆ ಅಥವಾ ಪತ್ರ ಮೂಲಕ ಪ್ರಸ್ತಾವನೆ ಸಲ್ಲಿಸಿರುವುದಿಲ್ಲ. ಹಾಗೆಯೇ, ಮಾರ್ಗ ಮಧ್ಯೆ ತಡೆ ಒಡ್ಡಿದ ಸಂದರ್ಭದಲ್ಲಿಯೂ, ಯಾವುದೇ ಮನವಿ ಅಥವಾ ಅಹವಾಲನ್ನು ಸಲ್ಲಿಸುವ ಪ್ರಸ್ತಾಪವನ್ನು ಮಾಡಿರುವುದಿಲ್ಲ.

ಮುಂದುವರೆಯಲು ರೈತ ಸಂಘಟನೆಯವರು ಅನುವು ಮಾಡಿ ಕೊಡದ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗ ಮೂಲಕ ಕಾರ್ಯದರ್ಶಿಯವರು ಪ್ರಯಾಣ ಮುಂದುವರೆಸಿದ್ದರು.

ಬಳಿಕ ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ: 2396 (ದೋಣಿಮಲೈ) ಗೆ ಸಂಬ0ಧಿಸಿದ ಕಬ್ಬಿಣದ ಅದಿರು ಮಾದರಿ ಸಂಗ್ರಹಣೆ, ತಯಾರಿಕೆ ಮತ್ತು ವಿಶ್ಲೇಷಣಾ ಪ್ರಯೋಗಾಲಯಗಳು ಮತ್ತು ರಣಜೀತಪುರ ರೈಲ್ವೇ ಸೈಡಿಂಗ್ಸ್ ನಲ್ಲಿನ ಖನಿಜ ದಾಸ್ತಾನು ಪ್ರದೇಶ ಮತ್ತು ಮೆಕ್ಯಾನಿಕನಲ್ ರಿಕ್ಲೆöÊಮರ್ ಲೋಡರ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಎನ್‌ಎಂಡಿಸಿ ಲಿ. ನ ಕಬ್ಬಿಣದ ಅದಿರು ಗಣಿ ಗುತ್ತಿಗೆ ಸಂಖ್ಯೆ:1111 ಮತ್ತು 2396 ಗಳಿಗೆ ಸಂಬAಧಿತ ವಿಷಯಗಳ ಕುರಿತಂತೆ ಎನ್‌ಎಂಡಿಸಿ ಲಿ., ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಆಂಧ್ರದ ಮದನಪಲ್ಲೆ ಬಳಿ ಅಪಘಾತ : ರಾಜ್ಯದ ಮೂವರ ಸಾವು
ಸಾರಿಗೆ ಸಂಸ್ಥೆ ಬಸ್ ಉರುಳಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಶೀತ ಗಾಳಿ
ಬೆಳಗಿನ ಜಾವ ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಜಮ್ಮು ಗಡಿಯ ಬಳಿ ಬಂಧಿತ ಬಾಂಗ್ಲಾದೇಶಿ ಪ್ರಜೆ ಪೊಲೀಸರಿಗೆ ಹಸ್ತಾಂತರ
Next Article ಬಿಎಸ್ಎನ್ಎಲ್ ರಾಷ್ಟ್ರವ್ಯಾಪಿ ವಾಯ್ಸ್ ಓವರ್ ವೈ-ಫೈ ಸೇವೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?