ಚಿತ್ರದುರ್ಗ, 18ಜನವರಿ(ಹಿ.ಸ):
ಆ್ಯಂಕರ್ : ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರಕಟವಾಗಿದೆ. 2023 ರ ಸಾಲಿನ ಅತ್ಯುತ್ತಮ ಕಾರ್ಯ ನಿರ್ವಹಣೆ ಹಿನ್ನೆಲೆ ಈ ಪ್ರಶಸ್ತಿ ಸಿಗಲಿದೆ.
ಭಾರತ ಚುನಾವಣಾ ಆಯೋಗದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದೆ. ಯುವ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಹಿನ್ನೆಲೆ ಉತ್ತಮ ಕಾರ್ಯ ನಿರ್ವಹಿಸಿದ ವಿಚಾರಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಇಬ್ಬರು ಅಧಿಕಾರಿಗಳಲ್ಲಿ ದಿವ್ಯಾಪ್ರಭು ಕೂಡ ಒಬ್ಬರು. 2023ರ ಸಾಲಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ.
ಇನ್ನು ಜನವರಿ 25 ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿಕ್ಕಿದೆ. ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದಿಂದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ
ಹಿಂದೂಸ್ತಾನ್ ಸಮಾಚಾರ್
