ತಮಕೂರು,12ನವೆಂಬರ್ (ಹಿ.ಸ):
ಆ್ಯಂಕರ್ :
ಸಿದ್ಧಗಂಗಾ ಮಠಕ್ಕೆ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ವಿಜಯೇಂದ್ರ ಅವರಿಗೆ ಯಲಹಂಕ ಶಾಸಕ ವಿಶ್ವನಾಥ್, ಸುರೇಶ್ ಗೌಡ, ಜ್ಯೋತಿ ಗಣೇಶ್, ಪ್ರೀತಂಗೌಡ ಸೇರಿ ಹಲವರು ಸಾಥ್ ನೀಡಿದರು. ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಬಿ.ವೈ.ವಿಜಯೇಂದ್ರ ಎಂದು ಘೋಷಣೆ ಕೂಗಿದರು.
ಹಿಂದೂಸ್ತಾನ್ ಸಮಾಚಾರ್
