
ಮೈಸೂರು,15 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ದಸರಾ ಎನ್ನುವುದು ಜೀವಂತ ಮಹಾಕಾವ್ಯ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು. ದಸರಾ ಒಂದು ರೀತಿ ಕಥಾ ಕಣಜ, ಮಹಾಕಾವ್ಯವಾಗಿ ಬೆಳಗಬೇಕು. ಕನ್ನಡ ನಮ್ಮ ಶೃತಿ ಆಗಬೇಕು, ಅಭಿವೃದ್ಧಿ ನಮ್ಮ ಕೃತಿ ಆಗಬೇಕು. ಕನ್ನಡದ ಭಾಷೆಗೆ ಮಿತಿ ಇದೆ, ಆದರೆ ಭಾವಕ್ಕೆ ಮಿತಿ ಎಲ್ಲಿದೆ? ನಮಗೆ ದೆಹಲಿ ಬೇಕು ದೆಹಲಿಗೂ ನಾವು ಬೇಕು. ದೆಹಲಿಗೆ ಕನ್ನಡವೇ ಬೇಕಾಗುತ್ತಿಲ್ಲ, ಅದಕ್ಕೆ ತಲೆಕೆಡಿಸಿಕೊಳ್ಳೋದು ಬೇಡ. ನಾವು ಕನ್ನಡವನ್ನು ಜಗತ್ತಿನಲ್ಲಿ ಮೆರೆಸಬೇಕಿದೆ. ಕರ್ನಾಟಕದ ಶಾಂತಿ, ಸಮೃದ್ಧಿ ಕನ್ನಡಿಗರ ಮಂತ್ರ ಆಗಬೇಕು. ಕಾವೇರಿಗೆ ಒಂದು ಮಿತಿಯಿದೆ, ಕನ್ನಡ ಭಾಷೆಗೆ ಒಂದು ಮಿತಿಯಿದೆ. ಅದರ ಭಾವಕ್ಕೆ ಎಲ್ಲಿ ಮಿತಿಯಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್
