• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕರೆ
Regional

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕರೆ

CliQ INDIA
Last updated: August 2, 2025 9:55 am
CliQ INDIA
Share
5 Min Read
SHARE

ಗದಗ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎಂದು ಕರೆಯುತ್ತಾರೆ. ವ್ಯಕ್ತಿ ಜೀವನದಲ್ಲಿ ನಿಶ್ಚಿತ ಗುರಿ ಸಾಧಿಸಬೇಕಾದರೆ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಇಂದಿನ ಯುವಜನತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು , ಗದಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವಜನರು ಮದ್ಯಪಾನ, ತಂಬಾಕು, ಗುಟ್ಕಾ , ಸಿಗರೇಟು ಸೇವನೆ ಮುಂತಾದ ದುಶ್ಚಟಗಳ ದಾಸರಾಗದಂತೆ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬೇಕು. ಇತ್ತೀಚಿನ ದಿವಸಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ನ ಅತಿಯಾದ ಬಳಕೆಯಿಂದ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ವ್ಯಸನಗಳ ಬೆನ್ನಟ್ಟಿ ಹೋಗದಂತೆ ದೃಢವಾದ ಆತ್ಮವಿಶ್ವಾಸ ಹೊಂದುವುದು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಅವರು ಮಾದಕ ವಸ್ತು ಬಳಕೆ ಮತ್ತು ಸಾಗಣಿ ಒಂದು ಶಿಕ್ಷಾರ್ಹ ಅಪರಾಧ. ಆರೋಗ್ಯ ಮತ್ತು ಮನಸ್ಸಿಗೆ ಮಾರಕ. ಸಾಂಕ್ರಾಮಿಕ ರೋಗಗಳಿಗೆ ಪ್ರೇರಕ ಎಚ್.ಐ.ವಿ. ಏಡ್ಸ್ ರೋಗಗಳಿಗೆ ವಾಹಕ, ಶಾಲಾ ಕಾಲೇಜುಗಳ ಗೈರು ಹಾಜರಿಗೆ ಇಂಬುಕೊಡುವ ಕಾರ್ಕೊಟಕ, ಉದ್ಯೋಗ , ಆದಾಯ ಹಾಳು ಮಾಡಲು, ವಿದ್ವಂಸಕ ಅಪರಾಧ, ಬ್ರಷ್ಟಾಚಾರ , ಕಪ್ಪು ಹಣ, ಭಯೋತ್ಪಾದನೆಗಳಿಗೆ ಪ್ರಚೋದಕವಾಗಿವೆ. ಮಾದಕ ವಸ್ತು ಮುಕ್ತ ಸಮಾಜ ಕಟ್ಟಲು ಶ್ರಮಿಸುತ್ತೇನೆ ಎಂದು ಮಾದಕವಸ್ತು ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಗದಗ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅರವಿಂದ ಕರಿನಾಗಣ್ಣವರ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ತಿಳಿಸಿದರು, ಚಿಕಿತ್ಸೆಗಿಂತ ತಡೆಗಟ್ಟವಿಕೆ ಉತ್ತಮವಾಗಿದ್ದು, ಒಂದು ಸಿಗರೇಟ್ ಸೇರುವುದರಿಂದ ಜೀವನದ ಅತ್ಯಮೂಲ್ಯ 11 ನಿಮಿಷಗಳನ್ನು ಕಳೆದುಕೊಳ್ಳುತ್ತೆ ಹಾಗೂ ಸಿಗರೇಟ್‌ನಲ್ಲಿ 6000ಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿರುತ್ತವೆ ಮತ್ತು ಅದರಲ್ಲಿ 60 ಕ್ಕೂ ಹೆಚ್ಚೂ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ದಾರಿ ಮಾಡಿ ಕೊಡುತ್ತವೆ, ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ, ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಡಿ ಮಾಡಿಕೊಂಡು ಜೀವನದಲ್ಲಿ ಸಫಲವಾಗಬೇಕೆಂದು ಹಾಗೂ ಪಿಪಿಟಿ ಮೂಲಕ ಮಾದಕ ವ್ಯಸನದ ಕಾರಣಗಳು, ಅದರಿಂದಾಗುವ ಪರಿಣಾಮ ಸೇರಿದಂತೆ ವ್ಯಸನದಿಂದ ಹೇಗೆ ಮುಕ್ತರಾಗಬೇಕೆಂದು ವಿದ್ಯಾರ್ಥಿಗಳಿಗೆ ವಿವರಿಸಿದರು.

ಗಮನ ಸೆಳೆದ ಜಾಗೃತಿ ಗೀತೆ, ಕಿರುನಾಟಕ : ರೋಣದ ಜೀವನ ಬೆಳಕು ಕಲಾ ತಂಡದ ರಾಜಶೇಖರ ಹಿರೇಮಠ ಹಾಗೂ ತಂಡ ಪ್ರಸ್ತುತಪಡಿಸಿದ ದೀಪ ನೃತ್ಯ ಹಾಗೂ ಮಾದಕ ವಸ್ತು ವಿರೋಧಿ ಜಾಗೃತಿ ಗೀತೆಗಳು ಶ್ರೋತೃಗಳ ಗಮನ ಸೆಳೆದವು. ಗದಗ ಬೆಟಗೇರಿಯ ಎಸ್‌ಎಸ್‌ಕೆ ಜಗದಂಬಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವ್ಯಸನಮುಕ್ತ ದಿನಾಚರಣೆಯ ನಿಮಿತ್ತ ಕಿರುನಾಟಕ ಪ್ರಸುತಪಡಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಶಿಕ್ಷಣ ಇಲಾಖೆಯ ಜಿಲ್ಲಾ ಉಪಸಮನ್ವಯಾಧಿಕಾರಿ ಎಂ.ಎಚ್.ಕಾಂಬಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಪ್ರೊ.ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು.

ಗದಗ, 1 ಆಗಸ್ಟ್ (ಹಿ.ಸ.)

ಆ್ಯಂಕರ್:- ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎಂದು ಕರೆಯುತ್ತಾರೆ. ವ್ಯಕ್ತಿ ಜೀವನದಲ್ಲಿ ನಿಶ್ಚಿತ ಗುರಿ ಸಾಧಿಸಬೇಕಾದರೆ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಇಂದಿನ ಯುವಜನತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು , ಗದಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.

ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವಜನರು ಮದ್ಯಪಾನ, ತಂಬಾಕು, ಗುಟ್ಕಾ , ಸಿಗರೇಟು ಸೇವನೆ ಮುಂತಾದ ದುಶ್ಚಟಗಳ ದಾಸರಾಗದಂತೆ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬೇಕು. ಇತ್ತೀಚಿನ ದಿವಸಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ನ ಅತಿಯಾದ ಬಳಕೆಯಿಂದ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ವ್ಯಸನಗಳ ಬೆನ್ನಟ್ಟಿ ಹೋಗದಂತೆ ದೃಢವಾದ ಆತ್ಮವಿಶ್ವಾಸ ಹೊಂದುವುದು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಅವರು ಮಾದಕ ವಸ್ತು ಬಳಕೆ ಮತ್ತು ಸಾಗಣಿ ಒಂದು ಶಿಕ್ಷಾರ್ಹ ಅಪರಾಧ. ಆರೋಗ್ಯ ಮತ್ತು ಮನಸ್ಸಿಗೆ ಮಾರಕ. ಸಾಂಕ್ರಾಮಿಕ ರೋಗಗಳಿಗೆ ಪ್ರೇರಕ ಎಚ್.ಐ.ವಿ. ಏಡ್ಸ್ ರೋಗಗಳಿಗೆ ವಾಹಕ, ಶಾಲಾ ಕಾಲೇಜುಗಳ ಗೈರು ಹಾಜರಿಗೆ ಇಂಬುಕೊಡುವ ಕಾರ್ಕೊಟಕ, ಉದ್ಯೋಗ , ಆದಾಯ ಹಾಳು ಮಾಡಲು, ವಿದ್ವಂಸಕ ಅಪರಾಧ, ಬ್ರಷ್ಟಾಚಾರ , ಕಪ್ಪು ಹಣ, ಭಯೋತ್ಪಾದನೆಗಳಿಗೆ ಪ್ರಚೋದಕವಾಗಿವೆ. ಮಾದಕ ವಸ್ತು ಮುಕ್ತ ಸಮಾಜ ಕಟ್ಟಲು ಶ್ರಮಿಸುತ್ತೇನೆ ಎಂದು ಮಾದಕವಸ್ತು ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಗದಗ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅರವಿಂದ ಕರಿನಾಗಣ್ಣವರ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ತಿಳಿಸಿದರು, ಚಿಕಿತ್ಸೆಗಿಂತ ತಡೆಗಟ್ಟವಿಕೆ ಉತ್ತಮವಾಗಿದ್ದು, ಒಂದು ಸಿಗರೇಟ್ ಸೇರುವುದರಿಂದ ಜೀವನದ ಅತ್ಯಮೂಲ್ಯ 11 ನಿಮಿಷಗಳನ್ನು ಕಳೆದುಕೊಳ್ಳುತ್ತೆ ಹಾಗೂ ಸಿಗರೇಟ್‌ನಲ್ಲಿ 6000ಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿರುತ್ತವೆ ಮತ್ತು ಅದರಲ್ಲಿ 60 ಕ್ಕೂ ಹೆಚ್ಚೂ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ದಾರಿ ಮಾಡಿ ಕೊಡುತ್ತವೆ, ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ, ಹಾಗಾಗಿ ಒಳ್ಳೆಯ ಅಭ್ಯಾಸಗಳನ್ನು ರೂಡಿ ಮಾಡಿಕೊಂಡು ಜೀವನದಲ್ಲಿ ಸಫಲವಾಗಬೇಕೆಂದು ಹಾಗೂ ಪಿಪಿಟಿ ಮೂಲಕ ಮಾದಕ ವ್ಯಸನದ ಕಾರಣಗಳು, ಅದರಿಂದಾಗುವ ಪರಿಣಾಮ ಸೇರಿದಂತೆ ವ್ಯಸನದಿಂದ ಹೇಗೆ ಮುಕ್ತರಾಗಬೇಕೆಂದು ವಿದ್ಯಾರ್ಥಿಗಳಿಗೆ ವಿವರಿಸಿದರು.

*ಗಮನ ಸೆಳೆದ ಜಾಗೃತಿ ಗೀತೆ, ಕಿರುನಾಟಕ* : ರೋಣದ ಜೀವನ ಬೆಳಕು ಕಲಾ ತಂಡದ ರಾಜಶೇಖರ ಹಿರೇಮಠ ಹಾಗೂ ತಂಡ ಪ್ರಸ್ತುತಪಡಿಸಿದ ದೀಪ ನೃತ್ಯ ಹಾಗೂ ಮಾದಕ ವಸ್ತು ವಿರೋಧಿ ಜಾಗೃತಿ ಗೀತೆಗಳು ಶ್ರೋತೃಗಳ ಗಮನ ಸೆಳೆದವು. ಗದಗ ಬೆಟಗೇರಿಯ ಎಸ್‌ಎಸ್‌ಕೆ ಜಗದಂಬಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವ್ಯಸನಮುಕ್ತ ದಿನಾಚರಣೆಯ ನಿಮಿತ್ತ ಕಿರುನಾಟಕ ಪ್ರಸುತಪಡಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಶಿಕ್ಷಣ ಇಲಾಖೆಯ ಜಿಲ್ಲಾ ಉಪಸಮನ್ವಯಾಧಿಕಾರಿ ಎಂ.ಎಚ್.ಕಾಂಬಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಪ್ರೊ.ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP

You Might Also Like

ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಪ್ರಸಾದ್ ಅಬ್ಬಯ್ಯ ಮನೆಗೆ ಟಿಪ್ಪು ಹೆಸರು ಇಟ್ಟುಕೊಳ್ಳಲಿ, – ಸಿ.ಟಿ ರವಿ
ಡಿ.05 ರಂದು ಸಿರಿಧಾನ್ಯ ನಡಿಗೆ – Hindusthan Samachar Kannada
ರಾಜ್ಯದ ಹಲವೆಡೆ ಹೆಚ್ಚಿದ ಚಳಿ, ಮಳೆ ಮುನ್ಸೂಚನೆಯಿಲ್ಲ
ಬಂಡೀಪುರ ಅರಣ್ಯ ರಸ್ತೆಯಲ್ಲಿ ಬಸ್ ಪಲ್ಟಿ, ಹಲವರಿಗೆ ಗಾಯ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರಾಷ್ಟ್ರದ ಅಭಿವೃದ್ಧಿಗೆ ಸಾಮೂಹಿಕ ಶ್ರಮ ಅಗತ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು
Next Article ಅಕ್ರಮ ಅಕ್ಕಿ ಸಾಗಾಟ ; ಇಬ್ಬರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?