
ಚಿಕ್ಕಮಗಳೂರು,9 ನವೆಂಬರ್ (ಹಿ.ಸ):
ಆ್ಯಂಕರ್ :
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹರುವನಹಳ್ಳಿ ಗ್ರಾಮದ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದೆ. ದುಷ್ಕರ್ಮಿಗಳು ಜೋಳದ ಹೊಲದ ಸುತ್ತಲೂ ತಂತಿ ಅಳವಡಿಸಿದ್ದರು. ವಿದ್ಯುತ್ ತಂತಿ ಸ್ಪರ್ಶಿಸಿ 24 ವರ್ಷದ ಗಂಡು ಆನೆ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಡಿಸಿಎಫ್ ಯಶಪಾಲ್ ಕ್ಷೀರಸಾಗರ, ಎಸಿಎಫ್ ವೀರೇಶ್ ಭೇಟಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
