ಬೆಂಗಳೂರು,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೈದರಾಬಾದ್ ಗೆ ವಿಶೇಷ ವಿಮಾನದಲ್ಲಿ ಗುರುವಾರ ತೆರಳಿದರು. ಸಚಿವ ಕೆ ಎಚ್ ಮುನಿಯಪ್ಪ, ಶಾಸಕರಾದ ಶಿವಣ್ಣ, ಎ ಸಿ ಶ್ರೀನಿವಾಸ್, ರಂಗನಾಥ್, ಇಕ್ಬಾಲ್ ಹುಸೇನ್, ನೆಲಮಂಗಲ ಶ್ರೀನಿವಾಸ್, ಶರತ್ ಬಚ್ಚೇಗೌಡ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ರಾಜ್ಯ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಜತೆಯಲ್ಲಿ ತೆರಳಿದರು.
ಹಿಂದೂಸ್ತಾನ್ ಸಮಾಚಾರ್
