• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕಡೆ ಕಾರ್ತಿಕ ಸೋಮವಾರ-ಸಹಸ್ರಾರು ಮಂದಿ ಭಕ್ತರಿಂದ ಅಂತರಗಂಗೆ ಕಾಶಿ ವಿಶ್ವೇಶ್ವರನ ದರ್ಶನ
Regional

ಕಡೆ ಕಾರ್ತಿಕ ಸೋಮವಾರ-ಸಹಸ್ರಾರು ಮಂದಿ ಭಕ್ತರಿಂದ ಅಂತರಗಂಗೆ ಕಾಶಿ ವಿಶ್ವೇಶ್ವರನ ದರ್ಶನ

CliQ INDIA
Last updated: November 18, 2025 11:50 am
CliQ INDIA
Share
4 Min Read
SHARE

ಕೋಲಾರ, ೧೭ ನವಂಬರ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕಾಶಿ ಎಂದೇ ಖ್ಯಾತಿಯಾದ ನಗರದ ಅಂತರಗಂಗೆಯ ವಿಶ್ವೇಶ್ವರ ಸನ್ನಿಧಿಯಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜೆ ನಡೆದಿದ್ದು, ಜಿಲ್ಲೆ, ರಾಜ್ಯ,ಹೊರರಾಜ್ಯಗಳಿಂದ ಬೃಹತ್ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಲ್ಲಿನ ಬಸವನ ಬಾಯಿಂದ ಬರುವ ಪವಿತ್ರ ಜಲ ಪ್ರೋಕ್ಷಣೆ ಮಾಡಿಕೊಂಡು ಪುನೀತರಾದರು. ಕಲ್ಲಿನ ಬಸವನ ಬಾಯಿಂದ ಬರುವ ನೀರು ಪವಿತ್ರ ಗಂಗಾನದಿಯಿಂದಲೇ ಬರುತ್ತಿದೆ ಎಂಬ ನಂಬಿಕೆ ಇಲ್ಲಿನ ಭಕ್ತರದ್ದಾಗಿದ್ದು, ಮುಂಜಾನೆಯ ಚಳಿಯಲ್ಲೂ ಭಕ್ತರು ಅಂತರಗಂಗೆ ಬೆಟ್ಟದತ್ತ ದಾಪುಗಾಲು ಹಾಕಿದ್ದು, ಬಜರಂಗದಳ, ವಿಶ್ವ ಹಿಂದೂ ಪರಿಷತ್ ವತಿಯಿಂದ ಉಚಿತ ಸಾರಿಗೆ ಸೇವೆಯನ್ನು ನಗರದ ಬಸ್ ನಿಲ್ದಾಣದ ಸಮೀಪದಿಂದ ವ್ಯವಸ್ಥೆ ಮಾಡಿದ್ದರು.

ಕೋಲಾರ ನಗರದ ಬಸ್ ನಿಲ್ದಾಣದ ಸಮೀಪ ಭಕ್ತಾದಿಗಳಿಗೆ ಸುಸ್ವಾಗತ ಕೋರುವ ಬೃಹತ್ ಕಮಾನುಗಳೊಂದಿಗೆ ಇಡೀ ಪ್ರದೇಶ ಕೇಸರೀಮಯ ವಾಗಿದ್ದು, ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಜರಂಗದಳದ ಬೃಹತ್ ಕಮಾ ನುಗಳು, ಬಂಟಿಂಗ್ಗಳು, ಭಗವ ಧ್ವಜಗಳೊಂದಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ಬೆಟ್ಟದ ತಪ್ಪಲಲ್ಲಿನ ಜಲಕಂಠೇಶ್ವರ ಸನ್ನಿಧಿಯಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಗೋಕುಲ ಮಿತ್ರಬಳಗ, ಸತ್ಯ ನಾರಾಯಣ ಜ್ಯುವೆಲರ್ಸ್ನ ವೆಂಕಟೇಶ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಉಚಿತ ಅನ್ನದಾನ ಮತ್ತು ಪ್ರಸಾದ ವಿನಿಯೋಗ ಇಡೀ ದಿನ ನಡೆಯಿತು. ಕಲ್ಲಿನ ಬಸವನ ಬಾಯಲ್ಲಿ ಬರುವ ಅಂತರಗಂಗೆಯ ಪವಿತ್ರ ಜಲಪ್ರೋಕ್ಷಣೆಗಾಗಿ ಸಾವಿರಾರು ಭಕ್ತರು ಆಗಮಿಸಿದ್ದು, ಸ್ವಾಮಿಯ ದರ್ಶನಕ್ಕೆ ಉದ್ದೂದ್ದ ಸರದಿ ಸಾಲು ಕಂಡು ಬಂತು.

ಗಂಗೆಯನ್ನು ಶಿರದಲ್ಲಿ ಧರಿಸಿರುವ ಗಂಗಾಧರ ಇಲ್ಲಿ ಕಾಶಿವಿಶ್ವೇಶ್ವರನಾಗಿದ್ದಾನೆ. ಜಲಕಂಠೇಶ್ವರ ಸನ್ನಿಧಿಯೂ ಇಲ್ಲಿದೆ. ಒಟ್ಟಾರೆ ಅಂತರಗಂಗೆ ಅಸಂಖ್ಯಾತ ಭಕ್ತರ ಪಾಲಿಗೆ ದಕ್ಷಿಣ ಕಾಶಿಯೆಂದೇ ನಾಡಿನಾದ್ಯಂತ ಖ್ಯಾತಿ ಪಡೆದುಕೊಂಡಿದೆ.

ಬಜರಂಗದಳ, ವಿಹಿಂಪ ನೇತೃತ್ವದಲ್ಲಿ ವ್ಯವಸ್ಥೆ ಮಾಡಿದ್ದ ಉಚಿತ ಬಸ್ ಸೇವೆಗೆ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್.ಶ್ರೀನಾಥ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಲಪತಿ, ಹಿಂದೂಗಳ ಪವಿತ್ರ ಕ್ಷೇತ್ರವಾದ ಅಂತರಗಂಗೆಯ ಅಭಿವೃದ್ದಿಗೆ ಮತ್ತಷ್ಟು ಸ್ಪಂದನೆ ಅಗತ್ಯವಿದೆ, ಪ್ರತಿ ವರ್ಷ ನಿರಂತರವಾಗಿ ಉಚಿತ ಬಸ್ ಸೇವೆ ಒದಗಿಸುವ ಮೂಲಕ ಹಿಂದೂ ಸಂಘಟನೆಗಳು ಈ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಲು ಕಾರಣವಾಗಿದೆ ಎಂದರು.

ಸಿಎಂಆರ್.ಶ್ರೀನಾಥ್ ಮಾತನಾಡಿ, ಜಿಲ್ಲೆಗೆ ಒಳ್ಳೆಯ ಮಳೆ,ಬೆಳೆಯಾಗಲಿ, ಜನತೆ ಶಾಂತಿ ನೆಮ್ಮದಿಯಿಂದ ಇರಲು ದಕ್ಷಿಣ ಕಾಶಿ ವಿಶ್ವೇಶ್ವರ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು. ಕಡೆ ಕಾರ್ತಿಕ ಸೋಮವಾರದ ಅಂತರಗಂಗೆ ಜಾತ್ರೆಗಾಗಿ ಹಿಂದೂ ಸಂಘಟನೆಗಳ ಮನವಿಗೆ ಸ್ಪಂದಿಸಿ ಅನೇಕರು ಉಚಿತ ಬಸ್ ಮತ್ತು ವಾಹನ ಸೇವೆಯನ್ನು ಒದಗಿಸಿದ್ದು, ಅಂಬಿಕಾ ಡ್ರಿಪ್ ಇರಿಗೇಷನ್, ಬಾಲಕೃಷ್ಣ ಜ್ಯುವೆಲರ್ಸ್, ಅನಂತ್ ಜ್ಯುವೆಲರ್ಸ್, ಜಿಲ್ಲಾ ಚಿನ್ನಬೆಳ್ಳಿ ವರ್ತಕರ ಸಂಘ, ನಾಗರಾಜ ಸ್ಟೋರ್ಸ್,ಭಜರಂಗದಳದಿಂದ ಮತ್ತಿತರರು ನೆರವಾದರು.

ಅಂತರಗಂಗೆಯ ದಕ್ಷಿಣ ಕಾಶಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ಪ್ರತಿ ಸೋಮವಾರದಂದು ವಿಶೇಷ ಪೂಜೆ, ಅಭಿಷೇಕ ನಡೆಯುತ್ತಿದೆ. ಕಾರ್ತಿಕ ಮಾಸದ ಕೊನೆ ಸೋಮವಾರವಾದ ಇಂದು ವಿಶ್ವ ಹಿಂದೂ ಪರಿಷತ್ ಸಹಕಾರ ಹಾಗೂ ಭಜರಂಗದಳದ ನೇತೃತ್ವದಲ್ಲಿ ನಡೆಯುವ ಜಾತ್ರೆಯಲ್ಲಿ ಅಸಂಖ್ಯಾತ ಭಕ್ತರು ಪಾಲ್ಗೊಳ್ಳುವುದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಬಜರಂಗದಳ ಹಾಗೂ ವಿಹಿಂಪ ಕಳೆದ ೨೬ ವರ್ಷಗಳಿಂದ ಭಕ್ತರಿಗೆ ಉಚಿತ ಬಸ್ ಸೌಲಭ್ಯ ಒದಗಿಸುವ ಕೆಲಸ ಮಾಡುತ್ತಿದೆ.

ಕಾರ್ತಿಕ ಮಾಸದ ಕೊನೆಸೋಮವಾರ ಅಂತರಗಂಗೆ ಶ್ರೀ ಕಾಶಿವಿಶ್ವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ದ ಪ್ರಯುಕ್ತ ಶ್ರೀ ಸ್ವಾಮಿ ಯವರಿಗೆ ಪ್ರಾತಃ ಕಾಲದಲ್ಲಿ ವಿಶೇಷ ಫಲ ಪಂಚಾಮೃತ ಅಭಿಷೇಕ ರುದ್ರಭಿಷೇಕ ವಿಶೇಷ ಅಲಂಕಾರ ಅರ್ಚನೆ ಮಹಾಮಂಗಳಾರತಿ ಪೂಜಾ ಕಾರ್ಯಕ್ರಮಗಳು ದೇವಾಲಯದ ಪ್ರಧಾನ ಅರ್ಚಕರಾದ ಡಾ ||ಕೆ. ಎಸ್. ಮಂಜುನಾಥ ದೀಕ್ಷಿತ್ ಹಾಗೂ ವೆಂಕಟೇಶ್ ದೀಕ್ಷಿತ್ ನೆರವೇರಿಸಿದರು.

ಶಿವಲಿಂಗ ದರ್ಶನಕ್ಕೆ ಸುಗಮ ವ್ಯವಸ್ಥೆ ಮಾಡಿಕೊಡಲು ಹಲವು ಸ್ವಯಂ ಸೇವಕರು ಕಾರ್ಯನಿರ್ವಹಿಸಿದರು.

ಸಿದ್ದತಾ ಕಾರ್ಯದಲ್ಲಿ ಬಜರಂಗದಳ ಮುಖಂಡರಾದ ಬಾಲಾಜಿ, ಬಾಬು ಅಪ್ಪಿ, ವಿಶ್ವನಾಥ್, ವಿಹಿಂಪದ ಡಾ.ಶಿವಣ್ಣ ಮತ್ತಿತರರು ಉಪಸ್ಥಿತರಿದ್ದು, ಜಾತ್ರೆಯ ಯಶಸ್ಸಿಗೆ ಸಹಕರಿಸಿದ ವಿವಿಧ ಸಂಘ ಸಂಸ್ಥೆಗಳು, ದಾನಿಗಳು, ಪೊಲೀಸ್ ಇಲಾಖೆ, ಸ್ವಚ್ಚತಾ ಕಾರ್ಯ ನಡೆಸಿದ ನಗರಸಭೆಗೆ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಜರಂಗದಳ ಮುಖಂಡ ಬಾಲಾಜಿ, ಬಾಬು,ಅಪ್ಪಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ವಿಜಯಕುಮಾರ್, ಬಿಜೆಪಿ ನಗರಘಟಕ ಯುವಮೋರ್ಚಾ ಅಧ್ಯಕ್ಷ ಸಾಯಮಾಳಿ, ವಿಶ್ವನಾಥ್, ಮಂಜು, ದೀಪು, ಸಾಯಿಸುಮನ್, ಸಾಯಿಮೌಳಿ, ರಾಜೇಶ್, ಭವಾನಿ, ವೆಂಕಿ, ಯಶ್, ವಿಶಾಖ, ಕೊಂಡೇ, ಮಹೇಶ್, ಸಾಯಿಕುಮಾರ್, ಪ್ರವೀಣ್, ಪ್ರಸನ್ನ, ಗೌತಮ್, ಹರೀಶ್, ಗಿರಿ, ಕಿರಣ್, ಸೋಮಶೇಖರ್, ಆನಂದ್, ಅರ್ಜುನ್, ಸುಧಾಕರ್, ಮೋಹನ್, ನಿತಿನ್, ಪವನ್, ನಿಥುನ್, ಸೋಮು, ಗೌತಮ್, ಮುರಳಿ, ದರ್ಶನ್, ಜಗದೀಶ್, ವಿನಯ್, ಲೋಹಿತ್, ರಾಮು, ನಾಮಲ ಮಂಜು,ಸಾಮಾಬಾಬು, ಮತ್ತಿತರರು ಸ್ವಯಂಸೇವಕರಾಗಿ ಕಾಶಿ ವಿಶ್ವೇಶ್ವರನ ದರ್ಶನಕ್ಕೆ ಭಕ್ತರಿಗೆ ನೆರವಾದರು.

ಚಿತ್ರ : ಕಡೆ ಕಾರ್ತಿಕ ಸೋಮವಾರ-ಸಹಸ್ರಾರು ಮಂದಿ ಭಕ್ತರಿಂದ ಕೋಲಾರ ನಗರ ಹೊರವಲಯದ ಅಂತರಗಂಗೆ ಕಾಶಿ ವಿಶ್ವೇಶ್ವರನ ದರ್ಶನ ಪಡೆದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ನಾಳೆ ಮಂಗಳೂರುಗೆ ಮೋದಿ, ನಗರದಾದ್ಯಂತ ರಸ್ತೆ ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಬದಲಾವಣೆ!
ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ
ಸಚಿವ ಸ್ಥಾನ ಪಡೆಯಲು ಯು.ಟಿ.ಖಾದರ್ ಪ್ರಯತ್ನ: ಆರ್. ಅಶೋಕ | BulletsIn
ಚೆಕ್ ಬೌನ್ಸ್ ಪ್ರಕರಣ ನಗರಸಭೆಯ ಮಾಜಿ ಅಧ್ಯಕ್ಷರಿಗೆ ಎರಡು ಕೋಟಿ ರೂ ದ0ಡ
ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ- ಜೋಶಿ.

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಇಂದು ಮಧ್ಯಪ್ರದೇಶಕ್ಕೆ ಆಸಿಯನ್ ದೇಶಗಳ ಉನ್ನತ ನಿಯೋಗ ಭೇಟಿ
Next Article ವೆಸ್ಟ್ ಇಂಡೀಸ್ ಏಕದಿನ ಸರಣಿಯಿಂದ ಡ್ಯಾರಿಲ್ ಮಿಚೆಲ್ ಹೊರಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?