ಬೆಂಗಳೂರು, 27 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ನಿಮ್ಮ ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್
