• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ದೀಪಾವಳಿ ಹಬ್ಬ : ಮುಂಜಾಗ್ರತಾ ಕ್ರಮ ವಹಿಸಿ – ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
Regional

ದೀಪಾವಳಿ ಹಬ್ಬ : ಮುಂಜಾಗ್ರತಾ ಕ್ರಮ ವಹಿಸಿ – ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

CliQ INDIA
Last updated: October 18, 2025 12:40 pm
CliQ INDIA
Share
3 Min Read
SHARE

ಕೊಪ್ಪಳ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಹಬ್ಬ ಆಚರಣೆಯನ್ನು ಯಾವುದೇ ರೀತಿಯ ಅನಾಹುತಗಳಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ ಸಂತಸದಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೇಶ ಹಾಗೂ ನಮ್ಮ ನಾಡಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂತಸ, ಸಂಭ್ರಮ, ಸಡಗರದಿಂದ ಪ್ರತಿವರ್ಷವೂ ಆಚರಣೆ ಮಾಡಲಾಗುತ್ತದೆ. ಅದರಂತೆ ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ಎಲ್ಲರ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವುದರ ಮೂಲಕ ಕತ್ತಲೆಯನ್ನು ಹೋಗಲಾಡಿಸಿ, ಬೆಳಕಿನ ಸಂಭ್ರಮವನ್ನು ಸಂತೋಷದ ಭರವಸೆಯೊಂದಿಗೆ, ಪಟಾಕಿಗಳನ್ನು ಸಿಡಿಸುವ ಮೂಲಕ ಹಬ್ಬವನ್ನು ಆಚರಿಸಲಾಗುವುದು.

ಆದರೆ ಪಟಾಕಿಗಳನ್ನು ಸಿಡಿಸುವ ಸಮಯದಲ್ಲಿ ಸಂಭವಿಸುವ ದುರಂತಗಳಿಂದ ಹಬ್ಬದ ಸಂತಸವು ಮಾಸಿಹೋಗಬಾರದು. ಹಾಗಾಗಿ ಬೆಳಗಿನ ಹಬ್ಬವನ್ನು ಆಚರಿಸುವಾಗ ಹಾಗೂ ಪಟಾಕಿಗಳನ್ನು ಸಿಡಿಸುವ ಸಂದರ್ಭದಲ್ಲಿ ಸಾರ್ವಜನಿಕರು ಬಹಳ ಜಾಗರೂಕತೆಯನ್ನು ಹಾಗೂ ಗೌರವಾನ್ವಿತ ಸುಪ್ರಿಂಕೋರ್ಟ್ ಮತ್ತು ಮಾನ್ಯ ಸರ್ಕಾರವು ನೀಡಿರುವ ಹಾಗೂ ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರು ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮತ್ತು ಪಟಾಕಿ ಸಿಡಿಸುವ ಸಮಯದಲ್ಲಿ ಗಮನ ಹಾಗೂ ಜಾಗ್ರತೆ ವಹಿಸುವಂತೆ ಮತ್ತು ಪ್ರಸ್ತುತ ತಿಳಿಸಲಾಗುವ ಅಂಶಗಳಂತೆ ಪಾಲನೆ ಮಾಡಬೇಕು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ 2018ರ ಮಾನ್ಯ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶದಂತೆ CSIR-NEERIಇವರು ಶಿಪಾರಸ್ಸು ಮಾಡಿರುವಂತೆ ಹಾಗೂ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶ ದಿನಾಂಕ: 30/10/2018 ರಲ್ಲಿ ತಿಳಿಸಿರುವಂತೆ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

ಜಿಲ್ಲೆಯಾದ್ಯಂತ ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದ್ದು, ಅದರಂತೆ ಎಲ್ಲರೂ ಪಾಲನೆ ಮಾಡಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ದೀಪಾವಳಿ ಹಬ್ಬದಲ್ಲಿ ಸಿಡಿಸುವ ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಸಬೇಕು. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಯಾವುದೇ ಸ್ಥಳೀಯ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ.

ಸಾರ್ವಜನಿಕರು ಸಂಚರಿಸುವ ರಸ್ತೆಗಳ ಮೇಲೆ ಹಾಗೂ ರಸ್ತೆಗಳ ಮಧ್ಯದಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಪಟಾಕಿಗಳನ್ನು ಬಳಕೆ ಮಾಡುವುದರಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ಅನಾಹುತವಾಗದಂತೆ ಹಬ್ಬವನ್ನು ಆಚರಣೆ ಮಾಡಬೇಕು. ಸಾರ್ವಜನಿಕರು ಪಟಾಕಿಗಳನ್ನು ಸಿಡಿಸುವಾಗ ಅಥವಾ ಬಳಕೆ ಮಾಡುವಾಗ ಬಹಳ ಜಾಗ್ರತೆಯನ್ನು ವಹಿಸಬೇಕು. ಚಿಕ್ಕ ಮಕ್ಕಳಿಗೆ ಪಟಾಕಿಗಳನ್ನು ಕೊಟ್ಟು ಅವುಗಳ ಬಳಕೆ ಬಗ್ಗೆ ಸರಿಯಾಗಿ ತಿಳಿಸದೇ ಆಚರಣೆ ಮಾಡುವುದು ಅನಾಹುತಗಳಿಗೆ ದಾರಿ ಮಾಡಿಕೊಡುತ್ತದೆ. ಕೆಲವೊಮ್ಮೆ ಪಟಾಕಿಗಳು ಕೂಡಲೇ ವ್ಯತಿರಿಕ್ತ ಪ್ರತಿಕ್ರಿಯೆಗೊಳಪಟ್ಟು ಸಿಡಿಯುವುದರಿಂದ ಪಟಾಕಿ ಬಳಕೆ ಮಾಡಿದವರಿಗೆ ಹಾಗೂ ಅಲ್ಲಿ ನೆರೆದಿರುವವರಿಗೆ ಗಾಯ ಅಥವಾ ಅನಾಹುತಗಳಾಗುವ ಸಾಧ್ಯತೆಗಳಿರುತ್ತವೆ. ಕಾರಣ ಪಟಾಕಿಗಳ ಬಳಕೆ ಸಮಯದಲ್ಲಿ ಬಹಳ ಜಾಗರೂಕತೆಯನ್ನು ವಹಿಸಬೇಕು. ಪಟಾಕಿಗಳನ್ನು ಸಿಡಿಸುವ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಹಾಗೂ ಸುತ್ತಮತ್ತಲಿನ ಮಕ್ಕಳ, ವೃದ್ಧರ ಅಥವಾ ಸಾರ್ವಜನಿಕ ಆರೋಗ್ಯ ಹಾಗೂ ಆಸ್ತಿಗಳಿಗೆ ದಕ್ಕೆಯಾಗದಂತೆ ನೋಡಿಕೊಳ್ಳಬೇಕು.

ಹಿಂದಿನಿಂದಲೂ ಸಂಪ್ರದಾಯಕವಾಗಿ ದೀಪಾವಳಿಯನ್ನು ಮಣ್ಣಿನ ಹಣತೆಗಳಲ್ಲಿ ದೀಪಗಳನ್ನು ಬೆಳಗಿಸುವುದರ ಮೂಲಕ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಅದರಂತೆ ಈ ವರ್ಷ ಹಬ್ಬದ ಆಚರಣೆಯಲ್ಲೂ ಸಹ ಮಣ್ಣಿನ ಹಣತೆಗಳನ್ನೇ ಬಳಕೆ ಮಾಡುವುದರಿಂದ ನಮ್ಮ ಸ್ಥಳೀಯ ಹಣತೆ ತಯಾರಿಕರಿಗೆ ಉತೇಜನ ಮತ್ತು ಉದ್ಯೋಗ ಸೃಷ್ಟಿಸಿದಂತಾಗುವುದು.

ಬೆಳಕಿನ ಹಬ್ಬ ದೀಪಾವಳಿ ಆಚರಣೆ ಸಂದರ್ಭದಲ್ಲಿ ಮಕ್ಕಳಿಗೆ ಪಟಾಕಿಗಳನ್ನು ಕೊಡುವಾಗ ಮತ್ತು ಸಿಡಿಸುವಾಗ ತಾತ್ಸಾರ ಮನೋಭಾವ ಅಥವಾ ಅಲಕ್ಷ್ಯತನ ವಹಿಸದೇ, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸಾರ್ವಜನಿಕರೆಲ್ಲರೂ ಎಚ್ಚರ ಮತ್ತು ಜಾಗ್ರತೆಯನ್ನು ವಹಿಸಿ, ಎಲ್ಲರ ಮನೆಗಳಲ್ಲಿ ಹಣತೆಯ ದೀಪಗಳನ್ನು ಬೆಳಗುವುದರ ಮೂಲಕ ಅತ್ಯಂತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುವಂತೆ ತಿಳಿಸುತ್ತಾ ಜಿಲ್ಲೆಯ ಜನತೆಗೆ ಜಿಲ್ಲಾಧಿಕಾರಿಗಳು ಶುಭ ಹಾರೈಸಿದ್ದಾರೆ ಎಂದು ಕೊಪ್ಪಳ ಜಿಲ್ಲಾಡಳಿತ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

7ನೇ ಆವೃತ್ತಿಯ ಮಂಗಳೂರು ಕಂಬಳ, ರೀಲ್ಸ್ ಸ್ಪರ್ಧೆ
ವಿಕಲಚೇತನರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ
ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ
ಹುಲಗಿ ಪಾದಯಾತ್ರಿಗಳ ಮೇಲೆ ಬಸ್ ಹರಿದು ಮೂವರ ದುರ್ಮರಣ
ಜಿಲ್ಲಾ ಕಾರ್ಮಿಕ ಉಪ ವಿಭಾಗದ ಕಚೇರಿ ಸ್ಥಳಾಂತರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಚೀನಾ ಜೊತೆಗೆ ವ್ಯಾಪಾರ ಕೊರತೆ ಏರಿಕೆ : ಕೇಂದ್ರಕ್ಕೆ ಜೈರಾಮ್ ರಮೇಶ್ ಎಚ್ಚರಿಕೆ
Next Article ಬಳ್ಳಾರಿ : ಅಕ್ಟೋಬರ್ 25, 26ರಂದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?